Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:13 - ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ - ಕೇಳಿರಿ, ಯಾಕೋಬ ವಂಶದವರಿಗೆ ಎಚ್ಚರ ಹೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:13
15 ತಿಳಿವುಗಳ ಹೋಲಿಕೆ  

ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು