ಆಮೋಸ 3:14 - ಕನ್ನಡ ಸತ್ಯವೇದವು J.V. (BSI)14 ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.