Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:15 - ಕನ್ನಡ ಸತ್ಯವೇದವು J.V. (BSI)

15 ನಾನು ಚಳಿಗಾಲದ ಅರಮನೆಯನ್ನೂ ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು; ದಂತಮಂದಿರಗಳು ಹಾಳಾಗುವವು, ಮಹಾಸೌಧಗಳು ಕೊನೆಗಾಣುವವು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:15
10 ತಿಳಿವುಗಳ ಹೋಲಿಕೆ  

ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕೂತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.


ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕೂತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ - ನಿನಗೆ ಹೇಳಬೇಕಾದದ್ದೊಂದು ದೇವೋಕ್ತಿಯಿದೆ ಅನ್ನಲು ಅವನು ತನ್ನ ಸಿಂಹಾಸನದಿಂದೆದ್ದನು.


ಇಗೋ, ಯೆಹೋವನು ಆಜ್ಞಾಪಿಸಲು ದೊಡ್ಡ ಮನೆಯು ಹೊಡೆಯಲ್ಪಟ್ಟು ಚೂರುಚೂರಾಗುವದು, ಚಿಕ್ಕ ಮನೆಯೂ ಮುರಿದುಹೋಗುವದು.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು.


ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು