Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:13 - ಕನ್ನಡ ಸತ್ಯವೇದವು J.V. (BSI)

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:13
17 ತಿಳಿವುಗಳ ಹೋಲಿಕೆ  

ಆದರೆ ಕಡೇ ದಿವಸಗಳಲ್ಲಿ ಕಠಿನಕಾಲಗಳು ಬರುವವೆಂಬದನ್ನು ತಿಳಿದುಕೋ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ಯಾವನೂ ಎದುರಿಸದಿರಲಿ, ಯಾವನೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.


ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ,


ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಸುಡಲು ಬಂದ ದಾಯಾದಿಯು ಒಂದು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋಗಬೇಕೆಂದು ಅದನ್ನೆತ್ತಿ - ನಿನ್ನ ಹತ್ತಿರ ಇನ್ನು ಯಾರಾದರೂ ಇದ್ದಾರೋ ಎಂದು ಒಳಮನೆಯಲ್ಲಿರುವವನನ್ನು ಕೇಳುವಾಗ ಅವನು ಇಲ್ಲವೆನ್ನಲು ಇವನು ಯೆಹೋವನ ಹೆಸರನ್ನು ಎತ್ತಾನೆಂದು ದಾಯಾದಿಯು ಭಯಪಟ್ಟು ಸುಮ್ಮನಿರು ಎಂದು ಅವನನ್ನು ತಡೆಯುವನು.


ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.


ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ ನಾನೂ ಕಾದುಕೊಂಡಿರಬೇಕೋ?


ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರಕೊಡಲಾರದವನಂತೆಯೂ ಆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು