Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:15 - ಕನ್ನಡ ಸತ್ಯವೇದವು J.V. (BSI)

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:15
42 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಆಗ ಅವನ ಸೇವಕರು ಅವನಿಗೆ - ಇಸ್ರಾಯೇಲ್ಯರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿಗೆ ಹೋಗುವದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡುವದಾದರೆ ಅವನು ನಿನ್ನ ಜೀವವನ್ನು ಉಳಿಸಾನು ಎಂದು ಹೇಳಿದರು.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.


ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ನಿನ್ನ ನೇಮಗಳ ಮೂಲಕ ವಿವೇಕಿಯಾದೆನು; ವಿುಥ್ಯಾಮಾರ್ಗವನ್ನೆಲ್ಲಾ ಹಗೆಮಾಡುತ್ತೇನೆ.


ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ [ದೇಶದಲ್ಲಿ] ವಾಸವಾಗಿರುವಿ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,


ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು