Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:3 - ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಭಟರಲ್ಲಿ ನೂರು ಮಂದಿ ಉಳಿಯುವರು; ಒಂದು ಊರಿನಿಂದ ಹೊರಟ ನೂರು ದಂಡಾಳುಗಳಲ್ಲಿ ಇಸ್ರಾಯೇಲ್ ವಂಶಕ್ಕೆ ಹತ್ತು ಜನ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:3
10 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.


ಒಂದು ಮನೆಯಲ್ಲಿ ಹತ್ತು ಜನರು ಉಳಿದರೂ ಅವರೆಲ್ಲರು ಸಾಯುವರು.


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು