Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:1 - ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:1
26 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


[ಬಾಬೆಲಿನವರೇ,] ಏಳಿರಿ. ಅಗುಳಿಯೂ ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಜನಾಂಗದ ಮೇಲೆ ಬೀಳಿರಿ!


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.


ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.


ಲೋಕಭೋಗಿಗಳ ಹಾಸ್ಯದಿಂದಲೂ ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತುಹೋಯಿತು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು