Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:14 - ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:14
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು