Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:2 - ಕನ್ನಡ ಸತ್ಯವೇದವು J.V. (BSI)

2 ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:2
19 ತಿಳಿವುಗಳ ಹೋಲಿಕೆ  

ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ?


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು.


ಬಾಬೆಲಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅವರೊಡನೆ ಮಾತಾಡುತ್ತಿರುವಷ್ಟರಲ್ಲಿ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್‍ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್‍ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು