Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:4 - ಕನ್ನಡ ಸತ್ಯವೇದವು J.V. (BSI)

4 ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:4
22 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಆಹಾ, ಯೆಹೋವನು ವಿುಡತೆಗಳನ್ನು ಉಂಟುಮಾಡಿದನು.


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ದೂತರ ವಿಷಯದಲ್ಲಿ ಹೇಳುವದೇನೆಂದರೆ - ದೇವರು ತನ್ನ ದೂತರನ್ನು ಗಾಳಿಗಳನ್ನಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.


ಕರ್ತನು ಮತ್ತೊಂದನ್ನು ನನಗೆ ತೋರಿಸಿದನು - ಇಗೋ, ಆತನು ನೂಲುಮಟ್ಟದ ಗೋಡೆಯ ಮೇಲೆ ನಿಂತಿದ್ದನು; ಆತನ ಕೈಯಲ್ಲಿ ನೂಲುಗುಂಡಿತ್ತು.


ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಅರಮನೆಗಳನ್ನು ನುಂಗಿಬಿಡುವದು;


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು