Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:9 - ಕನ್ನಡ ಸತ್ಯವೇದವು J.V. (BSI)

9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:9
16 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು.


ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.


ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]


ಅವನು - ಯಾರೊಬ್ಬಾಮನು ಖಡ್ಗದಿಂದ ಹತನಾಗುವನು, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂದು ನುಡಿದಿದ್ದಾನೆ ಎಂಬದಾಗಿ ಹೇಳಿಕಳುಹಿಸಿದನು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು


ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು