Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:14 - ಕನ್ನಡ ಸತ್ಯವೇದವು J.V. (BSI)

14 ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:14
32 ತಿಳಿವುಗಳ ಹೋಲಿಕೆ  

ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.


ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


[ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.


ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ,


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.


ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.


ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.


ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.


ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು