Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:8 - ಕನ್ನಡ ಸತ್ಯವೇದವು J.V. (BSI)

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:8
22 ತಿಳಿವುಗಳ ಹೋಲಿಕೆ  

ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ಐಗುಪ್ತವೇ ನೈಲಿನಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣನಿವಾಸಿಗಳನ್ನು ನಾಶಮಾಡುವೆನು ಅಂದುಕೊಳ್ಳುತ್ತದೆ.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ನೈಲ್ ನದಿಯಂತೆ ಉಬ್ಬಿರುವದು ಇದೇನು? ನೈಲಿನ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾವದು?


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು