Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:2 - ಕನ್ನಡ ಸತ್ಯವೇದವು J.V. (BSI)

2 ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:2
15 ತಿಳಿವುಗಳ ಹೋಲಿಕೆ  

ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.


ಆತನು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ ಅವನ ತಲೆಯು ಮೋಡಗಳಿಗೆ ತಗುಲಿದರೂ


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.


ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು