Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:3 - ಕನ್ನಡ ಸತ್ಯವೇದವು J.V. (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:3
10 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.


ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವದು ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು