Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:7
14 ತಿಳಿವುಗಳ ಹೋಲಿಕೆ  

ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,


ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿತವಾಯಿತು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು.


ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು