Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:8 - ಕನ್ನಡ ಸತ್ಯವೇದವು J.V. (BSI)

8 ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:8
27 ತಿಳಿವುಗಳ ಹೋಲಿಕೆ  

ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಅವಳು ಪುನಃ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಾಗ ಯೆಹೋವನು ಹೋಶೇಯನನ್ನು ಕುರಿತು - ಈ ಮಗುವಿಗೆ ಲೋರುಹಾಮ ಎಂಬ ಹೆಸರಿಡು; ಏಕಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವದಿಲ್ಲ, ಅವರನ್ನು ಎಷ್ಟು ಮಾತ್ರವೂ ಕ್ಷವಿುಸುವದಿಲ್ಲ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.


ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು