Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ದೆವ್ ಅಪ್ನಾಚ್ಯಾ ಪಯ್ಲೆ ಜಲಮಲ್ಯಾ ಲೆಕಾಕ್ ಘೆವ್ನ್ ಯೆಲ್ಲ್ಯಾ ತನ್ನಾ ತೆನಿ ಮಟ್ಲ್ಯಾನ್, ತೊ ಹ್ಯಾ ಜಗಾತ್ ಧಾಡ್ನಾರ್ ಹೊತ್ತೊ ತನ್ನಾ, ದೆವಾನ್,“ದೆವಾಚ್ಯಾ ಸಗ್ಳ್ಯಾ ದುತಾನಿ ತೆಕಾ ಆರಾದನ್ ಕರುಕ್ ಪಾಜೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:6
17 ತಿಳಿವುಗಳ ಹೋಲಿಕೆ  

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ದೇವರು ತನ್ನ ಒಬ್ಬನೇ ಮಗನನ್ನು ನಾವು ಆತನ ಮೂಲಕ ಜೀವಿಸುವದಕ್ಕಾಗಿ ಲೋಕಕ್ಕೆ ಕಳುಹಿಸಿಕೊಟ್ಟದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಆದದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ - [ದೇವರೇ], ಯಜ್ಞನೈವೇದ್ಯಗಳು ನಿನಗೆ ಇಷ್ಟವಾಗಿರಲಿಲ್ಲ, ನನಗೆ ದೇಹವನ್ನು ಸಿದ್ಧಮಾಡಿಕೊಟ್ಟಿ;


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ. ಎಂತಲೂ ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು ಎಂತಲೂ ದೇವರು ತನ್ನ ದೂತರೊಳಗೆ ಯಾವನಿಗಾದರೂ ಎಂದಾದರೂ ಹೇಳಿದ್ದುಂಟೋ?


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು