Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:9 - ಕನ್ನಡ ಸತ್ಯವೇದವು J.V. (BSI)

9 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿಯಾ ಖಲೆ ಸಮಾ ಹಾಯ್ ತೆಚೊ ಪ್ರೆಮ್ ಕರ್ತೆಯ್, ಅನಿ ಚುಕ್ ಅಸಲ್ಲ್ಯಾಚೊ ತಿಯಾ ಪ್ರೆಮ್ ಕರಿನ್ಹಯ್. ತೆಚ್ಯಾ ಸಾಟಿಚ್ ದೆವಾನ್, “ತುಜ್ಯಾ ದೆವಾನ್ ತುಕಾ ಎಚುನ್ ಕಾಡ್ಲ್ಯಾನಾಯ್, ಅನಿ ತುಜ್ಯಾ ವಾಂಗ್ಡಿಯಾಕ್ನಿ ದಿಲ್ಲ್ಯಾಚ್ಯಾನ್ಕಿ ಮೊಟ್ಯಾ ಗೌರವಾಚಿ ಖುಶಿ ತುಕಾ ದಿಲ್ಯಾನಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:9
42 ತಿಳಿವುಗಳ ಹೋಲಿಕೆ  

ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ನಿನ್ನ ನೇಮಗಳ ಮೂಲಕ ವಿವೇಕಿಯಾದೆನು; ವಿುಥ್ಯಾಮಾರ್ಗವನ್ನೆಲ್ಲಾ ಹಗೆಮಾಡುತ್ತೇನೆ.


ನನ್ನ ಸೇವಕನಾದ ದಾವೀದನನ್ನು ಕಂಡು ಪರಿಶುದ್ಧತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ಆತನು ನೀತಿನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.


ಹಾಗೆಯೇ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.


ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ನಾನು ತಿರಿಗಿ ಪಡಕೊಳ್ಳುತ್ತೇನೆಂದು ನನ್ನ ಪ್ರಾಣವನ್ನು ಕೊಡುತ್ತೇನೆ; ಅದರ ನಿವಿುತ್ತವಾಗಿ ತಂದೆಯು ನನ್ನನ್ನು ಪ್ರೀತಿಸುತ್ತಾನೆ.


ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು