Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:24 - ಕನ್ನಡ ಸತ್ಯವೇದವು J.V. (BSI)

24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕಾಮೆಕಾಕ್ ಮಜತ್ ಕರುಸಾಟ್ನಿ, ಅನಿ ಪ್ರೆಮ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚಿ ಕಾಳ್ಜಿ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:24
29 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ಸಹೋದರ ಸ್ನೇಹವು ನೆಲೆಯಾಗಿರಲಿ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಇದನ್ನು ಆಜ್ಞಾರೂಪವಾಗಿ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯೂ ಯಥಾರ್ಥವಾದದ್ದೆಂಬದನ್ನು ಪರೀಕ್ಷೆಯಿಂದ ತಿಳಿದುಕೊಳ್ಳಬೇಕೆಂದು ಹೇಳುತ್ತೇನೆ.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ನಿಮ್ಮಿಂದ ಪೋಷಣೆ ಹೊಂದುವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿಯಾಗಿರೋಣವೆಂದೇ ಮಾಡಿದೆವು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ ಪ್ರೀತಿಸುವವರೂ ದಮೆಯುಳ್ಳವರೂ ಪತಿವ್ರತೆಯರೂ


ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.


ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು