Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:4 - ಕನ್ನಡ ಸತ್ಯವೇದವು J.V. (BSI)

4 ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:4
19 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ.


ಧರ್ಮಶಾಸ್ತ್ರದ ಪ್ರಕಾರ ಸಮರ್ಪಣೆಯಾಗುತ್ತಾ ಬರುವ ಯಜ್ಞನೈವೇದ್ಯಗಳೂ ಸರ್ವಾಂಗಹೋಮಗಳೂ ದೋಷಪರಿಹಾರಕಯಜ್ಞಗಳೂ ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವದಿಲ್ಲ ಎಂದು ಮೇಲೆ ಹೇಳಿದ ತರುವಾಯ -


ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು