Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:7 - ಕನ್ನಡ ಸತ್ಯವೇದವು J.V. (BSI)

7 ಆಗ ನಾನು - ಇಗೋ, ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ. ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ ಎಂದು ಹೇಳಿದೆನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಇಂತೆಂದೆ ನಾನು : ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಮಿಯಾ ಮಟ್ಲೊ ಅಬಕ್ ದೆವಾ ತುಜ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಮಾಜ್ಯಾ ವಿಶಯಾತ್ ಲಿವಲ್ಲ್ಯಾ ಸಾರ್ಕೆ ತುಜ್ಯಾ ಮನಾಕ್ ಯೆಯ್ ಸಾರ್ಕೆ ಕರುಕ್ ಮಿಯಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:7
12 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.


ಹುಡುಕಿ ನೋಡಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ -


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಆಹಾ, ನಾನು ನೋಡಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರಳಿಯು ಕಾಣಿಸಿತು:


ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು