Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:8 - ಕನ್ನಡ ಸತ್ಯವೇದವು J.V. (BSI)

8 ಧರ್ಮಶಾಸ್ತ್ರದ ಪ್ರಕಾರ ಸಮರ್ಪಣೆಯಾಗುತ್ತಾ ಬರುವ ಯಜ್ಞನೈವೇದ್ಯಗಳೂ ಸರ್ವಾಂಗಹೋಮಗಳೂ ದೋಷಪರಿಹಾರಕಯಜ್ಞಗಳೂ ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವದಿಲ್ಲ ಎಂದು ಮೇಲೆ ಹೇಳಿದ ತರುವಾಯ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಪೈಲೆ ಮಟ್ಲ್ಯಾನ್; “ಜನಾವರಾಂಚೆ ಸಗ್ಳೆ ಆಂಗ್ ಜಾಳ್ವುತಲೆ ಅನಿ ಪಾಪಾಂಚ್ಯಾ ಸುಟ್ಕಾ ಸಾಟ್ನಿ ಭೆಟ್ವುತಲಿ ಬಲಿಯಾ ತುಜ್ಯಾ ಮನಾಕ್ ಯೆವ್ಕನಾತ್” ಜಾಲ್ಯಾರ್‍ಬಿ ಹೆ ಸಗ್ಳೆ ಖಾಯ್ದ್ಯಾನ್ ಸಾಂಗಲೆ ಸಾರ್ಕೆ ಭೆಟ್ವುತಲಿ ಬಲಿಯಾ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:8
4 ತಿಳಿವುಗಳ ಹೋಲಿಕೆ  

ಆದದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ - [ದೇವರೇ], ಯಜ್ಞನೈವೇದ್ಯಗಳು ನಿನಗೆ ಇಷ್ಟವಾಗಿರಲಿಲ್ಲ, ನನಗೆ ದೇಹವನ್ನು ಸಿದ್ಧಮಾಡಿಕೊಟ್ಟಿ;


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು