Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:33 - ಕನ್ನಡ ಸತ್ಯವೇದವು J.V. (BSI)

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಲೈ ಲೊಕಾನಿ ಮೊಟ್ಯಾ ವಿಶ್ವಾಸಾನುಚ್ ದುಸ್ರಿ ದುಸ್ರಿ ರಾಜಾ ಸ್ವತಾಚಿ ಕರುನ್ ಘೆಟ್ಲ್ಯಾನಿ, ನಿತ್ ಚಲ್ವುಲ್ಯಾನಿ,ದೆವಾಚಿ ಗೊಸ್ಟಿಯಾ ಘೆಟ್ಲ್ಯಾನಿ; ಅನಿ ಅದ್ಲ್ಯಾ ವಿಶ್ವಾಸಾನ್ ಸಿವಾಂಚಿ ತೊಂಡಾ ಭಾಂದ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:33
26 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.


ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ


ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು