Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:4 - ಕನ್ನಡ ಸತ್ಯವೇದವು J.V. (BSI)

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ವಿಶ್ವಾಸಾನುಚ್ ಅಬೆಲಾನ್ ಕಾಯಿನಾಚ್ಯಾನ್ ಬಿ ಬರೊ ಬಲಿ ದೆವಾಕ್ ದಿಲ್ಯಾನ್, ತೆಚ್ಯಾ ವೈನಾ ಅಪ್ನಿ ನಿತಿವಂತ್ ಮನುನ್ ಸಾಕ್ಷಿ ಘೆಟ್ಲ್ಯಾನ್. ದೆವಾನ್ ತೆಜಿ ಕಾನಿಕ್ ಒಪ್ಪುನ್ ಘೆಟಲ್ಲೆಚ್ ತಿ ಸಾಕ್ಷಿ ತೊ ಮರುನ್ ಗೆಲ್ಯಾರ್ಬಿ ವಿಶ್ವಾಸಾನ್ ಅಜುನ್‍ಬಿ ಬೊಲುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:4
21 ತಿಳಿವುಗಳ ಹೋಲಿಕೆ  

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು ಆಕೆ ಗಂಡುಮಗುವನ್ನು ಹೆತ್ತು - ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ನೇವಿುಸಿದನೆಂದು ಆ ಮಗುವಿಗೆ ಸೇತನೆಂಬ ಹೆಸರಿಟ್ಟಳು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.


ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು.


ಆ ನೀತಿವಂತನು ಅವರ ನಡುವೆ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿವಿುತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ಕರಕರೆಗೊಂಡನು.


ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು