Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:7 - ಕನ್ನಡ ಸತ್ಯವೇದವು J.V. (BSI)

7 ನೀವು ಶಿಕ್ಷಿತರಾಗುವದಕ್ಕಾಗಿಯೇ ನಿಮಗೆ ಶಿಕ್ಷೆಯಾಗುತ್ತದೆಂದು ತಿಳಿದು ಅದನ್ನು ಸಹಿಸಿಕೊಳ್ಳಿರಿ; ದೇವರು ನಿಮ್ಮನ್ನು ಮಕ್ಕಳೆಂದು ನಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತುಮಿ ಘೆತಲಿ ತರಾಸಾ ಸಗ್ಳಿ ಬಾಬಾನ್ ದಿಲ್ಲೆ ಮನುನ್ ಸೊಸುನ್ ಘೆವಾ, ಬಾಬಾನ್ ಪೊರಾಕ್ನಿ ಶಿಕ್ಷಾ ದಿಲ್ಲ್ಯಾ ಸಾರ್ಕೆ ದೆವ್ ತುಮ್ಕಾ ತ್ಯಾಚ್ ಥರಾನ್ ಶಿಕ್ಷಾ ದಿತಾ. ಬಾಬಾಕ್ನಾ ಶಿಕ್ಷಾ ಘೆಯ್ನಸಲ್ಲಿ ಪೊರಾ ಖೈಯ್ ಹಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:7
16 ತಿಳಿವುಗಳ ಹೋಲಿಕೆ  

ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.


ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು