Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:4 - ಕನ್ನಡ ಸತ್ಯವೇದವು J.V. (BSI)

4 ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ಮದ್ದಿ ಲಗ್ನಾಚ್ಯಾ ಜಿವನಾಕ್ ಪಾಜೆ ಹೊಲ್ಲೊ ಮಾನ್ ಗಾವುಂದಿತ್ ಅನಿ ಘೊವ್ ಬಾಯ್ಕೊಚ್ಯಾ ಮದ್ಲೊ ವಿಶ್ವಾಸ್ ಕಪಟ್ ನಸಲ್ಲೊ ಹೊವ್ನ್ ರಾಂವ್ದಿತ್; ಕಶ್ಯಾಕ್ ಮಟ್ಲ್ಯಾರ್, ಪೊಜ್ಡೆಪಾನ್ ಅನಿ ವೆಭಿಚಾರ್ ಕರ್‍ತಲ್ಯಾಂಚಿ ದೆವ್ ಝಡ್ತಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:4
33 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.


ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೇದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.


ಹೀಗಿರುವಲ್ಲಿ ಯೆಹೋವದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿ


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ಅನಂತರ ನಾನು ನನ್ನ ಹೆಂಡತಿಯನ್ನು ಕೂಡಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ - ಅದಕ್ಕೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;


ಪರಸ್ತ್ರೀಗಮನದಿಂದ ಅಪರಿಶುದ್ಧರಾಗಬಾರದು.


ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ, ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರಗಾಗಿವೆ, ಆದರೆ ಜಾರತ್ವ ಮಾಡುವವನು ತನ್ನ ದೇಹಕ್ಕೆ ಹಾನಿಕರವಾದ ಪಾಪವನ್ನು ಮಾಡುತ್ತಾನೆ.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ಅದು ನಾಶಲೋಕದವರೆಗೂ ನುಂಗುವ ಬೆಂಕಿಯಾಗಿದ್ದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು