Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:12 - ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ಮಾಜ್ಯಾ ಭಾವಾನು ಅನಿ ಭೆನಿಯಾನು ಹುರ್ಶಾಕಿತ್ ರ್‍ಹಾವಾ, ಝಿತ್ತ್ಯಾ ದೆವಾಕ್ನಾ ಧುರ್ ನ್ಹೆತಲೊ ಖೊಟೊ ಅನಿ ವಿಶ್ವಾಸಾನ್ ನಸಲ್ಲೊ ಮನ್ ತುಮ್ಚ್ಯಾ ಕೊನಾಚ್ಯಾ ಭುತ್ತುರ್ ರಾತಲೊ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:12
37 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ಅವರೋ - ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು ಎಂದು ಹೇಳುತ್ತಾರೆ.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ


ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಕೋಪಿಸಿಕೊಂಡು - ಅವರು ಯಾವಾಗಲೂ ಹೃದಯದಲ್ಲಿ ತಪ್ಪಿಹೋಗುವವರು ಎಂದು ಹೇಳಿದೆನು. ಆದರೆ ಅವರು ನನ್ನ ಮಾರ್ಗವನ್ನು ತಿಳುಕೊಳ್ಳಲಿಲ್ಲ.


ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.


ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನನ್ನು ಕುರಿತು, ನಮ್ಮಿಂದ ತೊಲಗಿಹೋಗು,


ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ.


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು