Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:7 - ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾಸಾಟಿಚ್ ಪವಿತ್ರ್ ಆತ್ಮೊ ಮನ್ತಾ: “ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಜಾಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:7
27 ತಿಳಿವುಗಳ ಹೋಲಿಕೆ  

ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ, ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಮಾತನ್ನು ಕೇಳಿ ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೇದು!


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.


ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ?


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವವನಾಗಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು