Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:15 - ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:15
20 ತಿಳಿವುಗಳ ಹೋಲಿಕೆ  

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವರು ನಿಮ್ಮೊಳಗೆ ಯಾರಿದ್ದಾರೆ? ನಾನು ಸತ್ಯವನ್ನು ಹೇಳುವವನಾಗಿರುವಲ್ಲಿ ನೀವು ನನ್ನ ಮಾತನ್ನು ನಂಬದೆ ಇರುವದು ಯಾಕೆ?


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.


ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಪರದೇಶಸ್ಥರಿಗೆ ಉಪದ್ರವಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಷ್ಟೆ; ಅಂಥವರ ಮನೋವ್ಯಥೆಯನ್ನು ತಿಳಿದೇ ಇರುತ್ತೀರಿ.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು