Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:11 - ಕನ್ನಡ ಸತ್ಯವೇದವು J.V. (BSI)

11 ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ‍ಹ್ಯಾ ವಿಶಯಾತ್ ಅಮಿ ಸಾಂಗುಕ್ ಗೆಲ್ಯಾರ್ ಲೈ ಹಾಯ್ ಖರೆ ತುಮ್ಚಿ ಕಾನಾ ದಾಟ್ ಹೊಲ್ಯಾತ್, ತಸೆಮನುನ್ ತುಮ್ಕಾ ಸೊಡ್ಸುನ್ ಸಾಂಗುಕ್ ಮಾಕಾ ಕಸ್ಟ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:11
12 ತಿಳಿವುಗಳ ಹೋಲಿಕೆ  

ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಯಾಕಂದರೆ ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.


ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.


ತಾನು ಮಾಡಬೇಕೆಂದಿದ್ದದ್ದು ತನಗೆ ತಿಳಿದಿದ್ದರೂ ಅವನನ್ನು ಪರೀಕ್ಷಿಸುವದಕ್ಕೆ ಈ ಮಾತನ್ನು ಹೇಳಿದನು.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು