Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:20 - ಕನ್ನಡ ಸತ್ಯವೇದವು J.V. (BSI)

20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮೆಲ್ಕಿಜೆದೆಕಾಚ್ಯಾ ಪಂಗಡಾ ನಮನಿ ಜೆಜು ಕನ್ನಾಬಿ ರ್‍ಹಾತಲೊ ಯಾಜಕ್ ಹೊವ್ನ್ ಜಾವ್ನ್ ತ್ಯಾ ಜಾಗ್ಯಾರ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:20
20 ತಿಳಿವುಗಳ ಹೋಲಿಕೆ  

ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಇಸ್ರಾಯೇಲ್ಯರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು