Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:25 - ಕನ್ನಡ ಸತ್ಯವೇದವು J.V. (BSI)

25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್ ಅಪ್ನಾಕ್ನಾ ದೆವಾಚ್ಯಾ ಜಗೊಳ್ ಯೆತಲ್ಯಾ ಲೊಕಾಕ್ನಿ ಜೆಜು ಕನ್ನಾಬಿ ರಾಕನ್ ಕರಿತ್ ರ್‍ಹಾತಾ, ಕಶ್ಯಾಕ್ ಮಟ್ಲ್ಯಾರ್, ತೊ ಜಿವನ್ ಕರ್‍ತಲೊ ಅನಿ ಲೊಕಾ ದೆವಾಕ್ಡೆ ಯೆತಾನಾ ತೆಂಕಾ ಮಜತ್ ಕರುಕ್ ತಯಾರ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:25
44 ತಿಳಿವುಗಳ ಹೋಲಿಕೆ  

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.


ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ಆತನಾದರೋ ಸದಾಕಾಲವಿರುವದರಿಂದ ಆತನ ಯಾಜಕತ್ವವು ಮತ್ತೊಬ್ಬರಿಗೆ ಹೋಗುವಂಥದಲ್ಲ.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ದೇವರ ಸಾನ್ನಿಧ್ಯ ಸೇರುವದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು.


ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನನ್ನು ಕುರಿತು, ನಮ್ಮಿಂದ ತೊಲಗಿಹೋಗು,


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು