Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:26 - ಕನ್ನಡ ಸತ್ಯವೇದವು J.V. (BSI)

26 ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜು ಕ್ರಿಸ್ತುಚ್ ಅಮ್ಕಾ ಪಾಜೆ ಹೊಲ್ಲೊ ಮೊಟೊ ಯಾಜಕ್, ತೊ ಪಾಪ್‍ ನಸಲ್ಲೊ, ಪರಿಶುದ್ದ್, ಬರೊ, ಪಾಪಾತ್ನಾ ಧುರ್ ಹೊತ್ತೊ ಹೊವ್ನ್ ಮಳ್ಬಾಕ್ಕಿಂತಾ ವೈಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:26
39 ತಿಳಿವುಗಳ ಹೋಲಿಕೆ  

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ಅಲ್ಲದ್ದೇನೂ ಮಾಡಲಿಲ್ಲ ಎಂದು ಹೇಳಿ -


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ, ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ ಅಂದನು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಐದನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಣ ಪ್ರಾಕಾರಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು