Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:8 - ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಬ್ರಾಹಾಮಾಕ್ನಾ ಧಾತ್ಲೊ ಎಕ್ ಭಾಗ್ ಘೆಟಲ್ಲೊ ಮೆಲ್ಕಿಜೆದೆಕ್ ಝಿತ್ತೊಚ್ ರ್‍ಹಾತಾ ಮನ್ತಲ್ಯಾಕ್ ಸಾಕ್ಷಿ ದಿಲ್ಲಿ ಹಾಯ್ , ಖರೆ ಹಿ ಯಾಜಕಾ ಧಾತ್ಲೊ ಎಕ್ ವಾಟೊ ಘೆತಾತ್ ಅನಿ ಉಲ್ಲೆಚ್ ದಿಸ್ ಜಿವಾನ್ ರ್‍ಹಾವ್ನ್ ಮಾನಾ ಲಗ್ಗುನಾಚ್ ಮರುನ್ ಜಾತಾತ್ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:8
12 ತಿಳಿವುಗಳ ಹೋಲಿಕೆ  

ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಲೇವಿಯರು ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣವು ಅಡ್ಡಿಯಾದದರಿಂದ ಅವರಲ್ಲಿ ಯಾಜಕರಾದವರು ಅನೇಕರು;


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.


ಇದು ಮಾತ್ರವಲ್ಲದೆ ದಶಮಭಾಗಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತೆಂದು ಹೇಳಬಹುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು