Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:12 - ಕನ್ನಡ ಸತ್ಯವೇದವು J.V. (BSI)

12 ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಮಾಕಾ ವಿರೊಧ್ ಹೊವ್ನ್ ಕರ್‍ತಲಿ ಬುರ್ಶಿ ಕಾಮಾ ಮಿಯಾ ಮಾಪ್ ಕರ್‍ತಾ, ತೆನಿ ಕರಲಿ ಚುಕ್ ಮಿಯಾ ಯಾದ್‍ಬಿ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:12
17 ತಿಳಿವುಗಳ ಹೋಲಿಕೆ  

ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು