Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕ್ರಿಸ್ತ್ ಅತ್ತಾ ಹಾಲಿ ಮುಖ್ಯ್ ಯಾಜಕ್ ಹೊವ್ನ್ ಯೆಲಾ, ಅತ್ತಾ ಅಮ್ಕಾ ಗಾವಲ್ಯಾ ಬರ್‍ಯಾ ಸಂಗ್ತಿಯಾಕ್ನಿ ತೊಚ್ ಮೊಟೊ ಯಾಜಕ್ ಹೊಲ್ಲೊ ಹಾಯ್, ಹುರಲ್ಲಿ ಯಾಜಕಾ ಸಗ್ಳಿ ದೆವಾಚ್ಯಾ ಗುಡಿತುಚ್ ಸೆವಾ ಕರಲಿ, ಕ್ರಿಸ್ತ್ ದೆವಾಚ್ಯಾ ಗುಡಿತ್ ಸೆವಾ ಕರಿನಸ್ತಾನಾ ತೆಚ್ಯಾಕ್ಕಿಂತಾಬಿ ಅಗ್ದಿ ಬರ್‍ಯಾ ಜಾಗ್ಯಾರ್ ಸೆವಾ ಕರ್‍ತಲೊ ತೆ ಪರಿಪುರ್ನ್ ಹೊಲ್ಲೆ ಮಾನ್ಸಾಕ್ನಾ ತಯಾರ್ ಹೊಲ್ಲೆ ನ್ಹಯ್, ಹ್ಯಾ ಜಗಾಕ್ ಮಿಳುಕ್ ಬಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:11
30 ತಿಳಿವುಗಳ ಹೋಲಿಕೆ  

ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.


ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ ನಾನು - ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರಳಿಯಲ್ಲಿ ಬರೆದದೆ.


ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.


ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು