Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:27 - ಕನ್ನಡ ಸತ್ಯವೇದವು J.V. (BSI)

27 ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹರ್ ಎಕ್ಲೊಬಿ ಎಗ್ದಾಚ್ ಮರ್‍ತಲೊ ಮಾನಾ ತೆಂಕಾ ದೆವಾಚ್ಯಾ ಇದ್ರಾಕ್ ನ್ಯಾಯ್ ನಿರ್‍ನಯ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:27
28 ತಿಳಿವುಗಳ ಹೋಲಿಕೆ  

ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.


ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು; ಎಲ್ಲಾ ಮಣ್ಣಿನಿಂದಾದವು, ಎಲ್ಲಾ ಮಣ್ಣಿಗೆ ಪುನಃ ಸೇರುವವು.


ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.


ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು