Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:6 - ಕನ್ನಡ ಸತ್ಯವೇದವು J.V. (BSI)

6 ಇವುಗಳು ಹೀಗೆ ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ಯಾವಾಗಲೂ ಗುಡಾರದ ಮುಂದಣ ಭಾಗದೊಳಗೆ ಹೋಗಿ ದೇವಾರಾಧನೆಯನ್ನು ನಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಸಗ್ಳೆ ಬಿಡಾರಾತ್ ತಯಾರ್ ಕರುನ್ ಥವಲ್ಲೆ ರ್‍ಹಾಯ್, ಅನಿ ಯಾಜಕ್ ಅಪ್ನಾಚಿ ಸದ್ದಾಚಿ ಸೆವಾ ಕರುಕ್ ಬಿರಾಡಾತ್ಲ್ಯಾ ಭಾಯ್ಲ್ಯಾ ಖೊಲಿತ್ ಜಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:6
9 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ


ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು