Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:68 - ಕನ್ನಡ ಸತ್ಯವೇದವು J.V. (BSI)

68 ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇವಿುನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟುವದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:68
20 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ಅವರು ಶಕ್ತ್ಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.


ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಾಯೇಲ್ಯರು ಪ್ರತಿದಿನದ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಹೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಅವರು ಸುತ್ತಣ ಪ್ರಾಂತಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ ಅದರ ಮೇಲೆ ಯೆಹೋವನಿಗೋಸ್ಕರ ಪ್ರಾತಃಸ್ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.


ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು.


ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು.


ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲೆ ಬೆಳ್ಳಿ, ನೂರು ಯಾಜಕವಸ್ತ್ರಗಳು.


ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು