Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:1 - ಕನ್ನಡ ಸತ್ಯವೇದವು J.V. (BSI)

1 ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿರುತ್ತಾರೆಂಬದನ್ನು ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:1
14 ತಿಳಿವುಗಳ ಹೋಲಿಕೆ  

ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?


ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡಿಸುವದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರೂ ಹೆಸರುಹೆಸರಾಗಿ ನೇವಿುಸಲ್ಪಟ್ಟರು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಕೂಟ ನಡೆಯಿತು.


ತರುವಾಯ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ - ಸೆರೆಯಿಂದ ಬಂದವರೆಲ್ಲರೂ ಯೆರೂಸಲೇವಿುನಲ್ಲಿ ಬಂದು ಕೂಡಬೇಕು,


ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.


ಯಾಜಕರೂ ಲೇವಿಯರೂ ಸೆರೆಯಿಂದ ತಿರಿಗಿ ಬಂದ ಬೇರೆ ಇಸ್ರಾಯೇಲ್ಯರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.


ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು