Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:15 - ಕನ್ನಡ ಸತ್ಯವೇದವು J.V. (BSI)

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:15
12 ತಿಳಿವುಗಳ ಹೋಲಿಕೆ  

ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.


ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ.


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು