Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:16 - ಕನ್ನಡ ಸತ್ಯವೇದವು J.V. (BSI)

16 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇವಿುನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ತೀರಲಿಲ್ಲ ಎಂಬದಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:16
11 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು


ಅವರು ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ ಇವರ ಸಹೋದರರಾದ ಇತರ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇವಿುಗೆ ತಿರಿಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇವಿುಸಿದರು.


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಅದಕ್ಕೆ ಯೆಹೂದ್ಯರು - ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷ ಹಿಡಿಯಿತು; ನೀನು ಮೂರು ದಿನದಲ್ಲಿ ಅದನ್ನು ಎಬ್ಬಿಸುವಿಯೋ? ಅಂದರು.


ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ತೆಗೆದುಕೊಂಡುಹೋಗಿ ಬಾಬೆಲಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇವಿುಸಿದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟು


ಅವನಿಗೆ - ಈ ಸಾಮಾನುಗಳನ್ನು ಯೆರೂಸಲೇವಿುನ ದೇವಾಲಯದಲ್ಲಿಡುವದಕ್ಕೋಸ್ಕರ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟಿಸು ಎಂದು ಆಜ್ಞಾಪಿಸಿದನು.


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು