Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:7 - ಕನ್ನಡ ಸತ್ಯವೇದವು J.V. (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:7
8 ತಿಳಿವುಗಳ ಹೋಲಿಕೆ  

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -


ರಾಜನಾದ ನೆಬೂಕದ್ನೆಚ್ಚರನಿಗೆ - ಅರಸೇ, ಚಿರಂಜೀವಿಯಾಗಿರು!


ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ.


ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು