Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:8 - ಕನ್ನಡ ಸತ್ಯವೇದವು J.V. (BSI)

8 ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:8
20 ತಿಳಿವುಗಳ ಹೋಲಿಕೆ  

ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.


ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು.


ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ [ಯೆಹೂದ] ಸಂಸ್ಥಾನಪ್ರಧಾನರ ಪಟ್ಟಿ. (ಸಾಧಾರಣ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ದೇವಸ್ಥಾನದಾಸರೂ ಸೊಲೊಮೋನನ ದಾಸರ ವಂಶದವರೂ ತಮ್ಮ ತಮ್ಮ ಸ್ವಾಸ್ತ್ಯಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇವಿುಗೂ ಯೆಹೂದಪ್ರಾಂತದ ಸ್ವಂತ ಪಟ್ಟಣಗಳಿಗೂ


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ


ನಮ್ಮ ಶರಣನಿಗೆ ತಮ್ಮ ಶರಣರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ತೀರ್ಮಾನಿಸುತ್ತಾರಲ್ಲಾ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.


ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ -


ಅಲ್ಲಿನ ಹಿರಿಯರ ಹತ್ತಿರ - ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ವಿಚಾರಮಾಡಿದ್ದಲ್ಲದೆ


ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು