Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:1 - ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾರ್ಯಾವೆಷನ ಆಜ್ಞಾನುಸಾರವಾಗಿ ಗ್ರಂಥಸಂಗ್ರಹವಾಗಿದ್ದ ಬಾಬೆಲಿನ ಭಂಡಾರದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:1
16 ತಿಳಿವುಗಳ ಹೋಲಿಕೆ  

ಅರಸನಿಗೆ ಸರಿತೋಚುವದಾದರೆ ಯೆರೂಸಲೇವಿುನ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬದರ ವಿಷಯವಾಗಿ ಬಾಬೆಲಿನ ರಾಜ ಭಂಡಾರದಲ್ಲಿ ಹುಡುಕಿನೋಡಲಿ. ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬದು ನಮಗೆ ತಿಳಿಸೋಣವಾಗಲಿ ಎಂಬದೇ.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಆಹಾ, ನಾನು ನೋಡಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರಳಿಯು ಕಾಣಿಸಿತು:


ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;


ಆಗ ನಾನು - ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರಳಿಯಲ್ಲಿ ಬರೆದದೆ.


ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,


ನನ್ನ ಆಜ್ಞಾನುಸಾರ ವಿಚಾರಣೆಯಾಗುವಲ್ಲಿ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ತಿರುಗಿ ಬೀಳುತ್ತಾ ದ್ರೋಹಮಾಡುತ್ತಾ ದಂಗೆಯೆಬ್ಬಿಸುತ್ತಾ


ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು