Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:14 - ಕನ್ನಡ ಸತ್ಯವೇದವು J.V. (BSI)

14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇವಿುನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ವಿಮರ್ಶೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:14
15 ತಿಳಿವುಗಳ ಹೋಲಿಕೆ  

ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು -


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.


ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.


ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,


ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ.


ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು