Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:21 - ಕನ್ನಡ ಸತ್ಯವೇದವು J.V. (BSI)

21 ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 :ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:21
11 ತಿಳಿವುಗಳ ಹೋಲಿಕೆ  

ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ.


[ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನಂದರೆ -] ಹೊಳೆಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ - ನೀವು ಅವರ ಗೊಡವೆಗೆ ಹೋಗಬೇಡಿರಿ.


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;


ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.


ತರುವಾಯ ನಾನು ಅರಸನಿಗೆ - ಹೊಳೆಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತಗಳಲ್ಲಿ ಹಾದು ಯೆಹೂದ ಸೀಮೆಗೆ ಹೋಗುವದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು