Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:1 - ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಮನಾ ಸಾರ್ಕೆ ಕ್ರಿಸ್ತ್ ಜೆಜುಚೊ ಎಕ್ ಅಪೊಸ್ತಲ್ ಪಾವ್ಲು, ಎಫೆಜಾತ್ಲ್ಯಾ ಕ್ರಿಸ್ತಾ ಜೆಜುಚ್ಯಾ ಎಕ್ವಟಾಚ್ಯಾ ಜಿವನಾತ್ ವಿಶ್ವಾಸಾನ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:1
27 ತಿಳಿವುಗಳ ಹೋಲಿಕೆ  

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು.


ಮನೆಯಿಲ್ಲದವರೂ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಬೈಸಿಕೊಂಡು ಹರಸುತ್ತೇವೆ; ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ; ಅಪಕೀರ್ತಿಹೊಂದಿ ಆದರಿಸುತ್ತೇವೆ.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.


ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು