Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:20 - ಕನ್ನಡ ಸತ್ಯವೇದವು J.V. (BSI)

20 ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20-21 ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೊಚ್ ಮೊಟೊ ಬಳ್ ತೆನಿ ವಾಪ್ರುನ್ ಕ್ರಿಸ್ತಾಕ್ ಮರಲ್ಲ್ಯಾಕ್ನಾ ಝಿತ್ತೊ ಕರ್ಲ್ಯಾನ್ ಅನಿ ಸರ್ಗಾಚ್ಯಾ ರಾಜಾತ್ ಅಪ್ನಾಚ್ಯಾ ಉಜ್ವ್ಯಾ ಭಾಜುಕ್ ತೆಕಾ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:20
33 ತಿಳಿವುಗಳ ಹೋಲಿಕೆ  

ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳುಕೊಂಡು ಆತನ ಮರಣದ ವಿಷಯದಲ್ಲಿ ಆತನಿಗೆ ಸರೂಪನಾಗಬೇಕೆಂಬದೇ ನನ್ನ ಕುತೂಹಲವಾಗಿದೆ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ?


ಆತನನ್ನು ಮರದ ಕಂಬಕ್ಕೆ ತೂಗಹಾಕಿ ಕೊಂದರು.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಭೂಪರಲೋಕಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನಗಳಾಗಲಿ ಪ್ರಭುತ್ವಗಳಾಗಲಿ ದೊರೆತನಗಳಾಗಲಿ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನ ಮುಖಾಂತರವಾಗಿಯೂ ಆತನಿಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು